Belagavi NewsBelgaum NewsKannada NewsKarnataka NewsLatestPolitics
*ಶಿಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಗಣೇಶಪುರ ಶಾಖೆಯಲ್ಲಿ ಮಹಾ ಶಿವರಾತ್ರಿಯ ಅಂಗವಾಗಿ ಶನಿವಾರ ನಡೆದ ವಿಶೇಷ ಪೂಜೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡರು.

ಇದೇ ಸಂದರ್ಭದಲ್ಲಿ, ಸಚಿವರ ಜನ್ಮದಿನದ ಅಂಗವಾಗಿ ಶಾಖೆಯ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಸರ್ವರಿಗೂ ಶಿವನ ಆಶಿರ್ವಾದ ಲಭಿಸಲಿ, ದೇವರ ಅನುಗ್ರಹವಿದ್ದರೆ ಜೀವನ ಸಾರ್ಥಕವಾಗುತ್ತದೆ. ಮಹಾಶಿವರಾತ್ರಿ ಸರ್ವರಿಗೂ ಸುಖ, ಶಾಂತಿ ನೀಡಲಿ ಎಂದು ಸಚಿವರು ಹಾರೈಸಿದರು.




