Karnataka NewsLatestPolitics

*ನನ್ನ ಉಸಿರು ಇರುವವರೆಗೆ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆ ವಿರುದ್ಧ ಹೋರಾಡುತ್ತೇನೆ: ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ: ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Home add -Advt

ಸಾಮಾಜಿಕ ಜಾಕತಾಣಗಳಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವ ವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವ ವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.


Related Articles

Back to top button