Kannada NewsKarnataka NewsLatest

*ಬಹಿರ್ದೆಸೆಗೆ ಹೋಗಿದ್ದಾಗ ದುರಂತ: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆಯ ಜಗಳೂರು ತಾಲೂಕಿನ ಗೋಗೊದ್ದು ಗ್ರಾಮದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಮುಜಾಮಿಲ್ ಮೃತ ವಿದ್ಯಾರ್ಥಿ. ಚಮನ್ ಸಾಬ್ ಹಾಗೂ ಫಾತಿಮಾ ದಂಪತಿಯ ಪುತ್ರ.

ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ ಓದುತ್ತಿದ್ದ. ರಜೆ ಇದ್ದ ಕಾರಣಕ್ಕೆ ವಿದ್ಯಾರ್ಥಿ ಮನೆಗೆ ಬಂದಿದ್ದ. ಬೆಳಿಗ್ಗೆ ಬಹಿರ್ದೆಸೆಗೆ ಹೋಗಿದ್ದಾಗ ಬಾಲಕನಿಗೆ ಹೃದಯಘಾತವಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

Home add -Advt

Related Articles

Back to top button