CrimeKarnataka NewsLatest
*ಯುವಕನನ್ನು ಬರ್ಬರವಾಗಿ ಹತ್ಯೆಗೈದು ರಾಷ್ಟ್ರೀಯ ಹೆದ್ದಾರಿ ಮೇಲೆ ಬಿಸಾಕಿ ಹೋದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ದುಷ್ಕರ್ಮಿಗಳು ರಾಷ್ಟ್ರೀಯ ಹೆದ್ದರೈ ರಸ್ತೆ ಮೇಲೆ ಶವ್ವನ್ನು ಬಿಸಾಕಿ ಹೋಗಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ಗದಗ ರಸ್ತೆಯಲ್ಲಿ ಐಟಿಸಿ ಗೋಡೌನ್ ಸಮೀಪ ರಸ್ತೆಯ ಮೇಲೆ ಶವ ಬಿಸಾಕಿ ಹೋಗಿದ್ದಾರೆ. 29 ವರ್ಷದ ಮಜುಂನಾಥ್ ಗಾಣಿಗೇರ ಕೊಲೆಯಾದ ಯುವಕ.
ರಾಷ್ಟ್ರೀಯ ಹೆದ್ದಾರಿ ಮೇಲೆ ಯುವಕನ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಯುವಕನ್ನು ಕೊಲೆ ಮಾಡಲಾಗಿದೆ ಎಂಬುದು ತನಿಖೆ ಬಳಿಕ ಬಯಲಾಗಬೇಕಿದೆ.



