Kannada NewsKarnataka NewsLatest
*ಜಿಲ್ಲಾಧಿಕಾರಿ, ಎಡಿಸಿ ಸಹಿ ದುರುಪಯೋಗ: ನಕಲಿ ಬಿಲ್ ಸೃಷ್ಟಿಸಿದ ಐವರು ನೌಕರರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ಡಿಜಿಟಲ್ ಸಹಿ ದುರುಪಯೋಗ ಮಾಡಿ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಹಾಗೂ ಎಡಿಸಿ ಅವರ ಡಿಜಿಟಲ್ ಸಹಿ ದುರುಪಯೋಗ ಪಡಿಸಿಕೊಂಡು 15 ಲಕ್ಷ ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಆರು ನೌಕರರು ಜಿಲ್ಲಾ ಖಜಾನೆಗೆ ಕಳುಹಿಸಿದ್ದರು.ಈ ವೇಳೆ ಸಹಿ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಖಜಾನೆ ಇಲಾಖೆಯಿಂದ ಆಕ್ಷೇಪಣೆ ಬಂದಿತ್ತು. ಈ ವೇಳೆ ಪರಿಶೀಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ.
ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆಯ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ್, ಮೆಹಬೂಬ್ ಬಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇವರಲ್ಲಿ ಸೈಯದ್ ಸಾದಿಕ್ ತಲೆಮರೆಸಿಕೊಂಡಿದ್ದು, ಉಳಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ.




