
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠ ಬೆಳಗಾವಿಯಲ್ಲಿ ನ್ಯಾಯಾಂಗ ಸದಸ್ಯರಾದ ರವಿಶಂಕರ ಮತ್ತು ಮಹಿಳಾ ಸದಸ್ಯರಾದ ಸುನಿತಾ ಚ. ಬಾಗೇವಾಡಿ ಇವರುಗಳು ಮಾರ್ಚ 16 ರಿಂದ 18 ರವರೆಗೆ ಭೌತಿಕ ಕೋರ್ಟ ಕಲಾಪ ಜರುಗಿಸಿ ಒಟ್ಟು 257 ಪ್ರಕರಣಗಳ ವಿಚಾರಣೆ ನಡೆಸಿ ಅದರಲ್ಲಿ 78 ಪ್ರಕರಣಗಳನ್ನು ಇತ್ಯರ್ಥಗೊಳಿಸಿರುತ್ತಾರೆ ಎಂದು ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಖಾಯಂ ಸಂಚಾರಿ ಪೀಠದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




