Kannada NewsLatestNational

*ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ: ಬಾಲರಾಮನಿಗೆ ಸೂರ್ಯರಶ್ಮಿ ತಿಲಕ*

ಪ್ರಗತಿವಾಹಿನಿ ಸುದ್ದಿ: ಇಂದು ಶ್ರೀರಾಮನವಮಿ ಹಿನ್ನೆಲೆಯಲ್ಲಿ ದೇಶಾದ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ. ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ನವಮಿ ಸಂಭ್ರಮ ಮನೆ ಮಾಡಿದ್ದು, ಬಾಲರಾಮಮನ ಹಣೆಗೆ ಸೂರ್ಯ ತಿಲಕ ಮೂಡಿದೆ.

ರಾಮನವಮಿ ಹಿನ್ನೆಲೆಯಲ್ಲಿ ಅಯೋದ್ಯೆ ಬಾಲರಾಮನ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದು, ಈ ಶುಭ ಸಂದರ್ಭದಲ್ಲಿ ಸೂರ್ಯನ ಕಿರಣಗಳು ರಾಮಲಲ್ಲಾ ವಿಗ್ರಹದ ಹಣೆಯನ್ನು ಸ್ಪರ್ಶಿಸಿದ್ದು, ಈ ಅಪರೂಪದ ದಿವ್ಯ ದೃಶ್ಯವನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.

ಮಧ್ಯಾಹ್ನ 12 ಗಂಟೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯನ ಕಿರಣಗಳು ಸ್ಪರ್ಶಿಸಿದ್ದು, ಸೂರ್ಯ ತಿಲಕವಿಟ್ಟಂತೆ ಭಾಸವಾಯಿತು. ಸುಮಾರು 3ರಿಂದ 4 ನಿಮಿಷಗಳ ಕಾಲ ಸೂರ್ಯನ ಕಿರಣಗಳು ಬಾಲರಾಮನ ಹಣೆಗೆ ತಿಲಕವಿಟ್ಟಂತೆ ನೆಟ್ಟಿದ್ದವು. ಈ ವಿಸ್ಮಯಕಾರಿ ಕ್ಷಣಗಳನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ರಾಮಮಂದಿರದಲ್ಲಿ ಜೈ ಶ್ರೀರಾಮ್ ಎಂಬ ಜಯಘೋಷಗಳು ಮೊಳಗಿದವು.

Home add -Advt

ರಾಮನವಮಿ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆಯಿಂದ ಅಯೋಧ್ಯೆಗೆ ಭಕ್ತಸಾಗರವೇ ಹರಿದು ಬಂದಿದ್ದು, ತಡ ರಾತ್ರಿ 2 ಲಕ್ಷಕ್ಕೂ ಅಧಿಕ ಭಕ್ತರು ಬಾಲರಾಮನ ದರ್ಶನ ಪಡೆದರು. ಇಂದು ರಾತ್ರಿ 10 ಗಂಟೆಯವರೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.


Related Articles

Back to top button