Kannada NewsNationalPolitics

*ಲೋಕಸಭಾ ಕ್ಷೇತ್ರಗಳ ಪುನರ್​ ವಿಂಗಡಣೆ ಕೇಂದ್ರ ಸರ್ಕಾರದ ಪಕ್ಷಪಾತದ ಕ್ರಮ: ದಳಪತಿ ವಿಜಯ್ ಕಿಡಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಕ್ಷೇತ್ರಗಳ ಪುನರ್​ ವಿಂಗಡಣೆ ಎನ್ನುವುದು ಕೇಂದ್ರ ಸರ್ಕಾರದ ಪಕ್ಷಪಾತದ ಕ್ರಮ ಎಂದು ಟಿವಿಕೆ ಸಂಸ್ಥಾಪಕ, ನಟ ದಳಪತಿ ವಿಜಯ್ ಕಿಡಿಕಾರಿದ್ದಾರೆ.

ಸಂವಿಧಾನ 131ನೇ ತಿದ್ದುಪಡಿ ಮಸೂದೆ, 2026ರ ಮೂಲಕ ಲೋಕಸಭೆಯ ಸದಸ್ಯರ ಸಂಖ್ಯೆಯನ್ನು 543 ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾಪವು ದಕ್ಷಿಣ ಮತ್ತು ಉತ್ತರ ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಗಣನೀಯವಾಗಿ ಬದಲಾಯಿಸುತ್ತದೆ. ಇದು ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತರ ರಾಜ್ಯಗಳದನ್ನು ಹೆಚ್ಚಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳ ಜನರ ಧ್ವನಿ ಸಂಸತ್ತಿನಲ್ಲಿ ಸರಿಯಾಗಿ ಕೇಳಿಸದಂತಾಗುತ್ತದೆ. ಇದು ಕೇಂದ್ರ ಸರ್ಕಾರದ ಪಕ್ಷಪಾತದ ಕ್ರಮವಾಗಿದೆ. ಇದು ಒಕ್ಕೂಟ ನಿರ್ದೇಶನಗಳನ್ನು ಪಾಲಿಸಿದ ರಾಜ್ಯಗಳಿಗೆ ಶಿಕ್ಷೆಯಾಗುತ್ತದೆ ಮತ್ತು ಪಾಲಿಸದವುಗಳಿಗೆ ಬಹುಮಾನ ನೀಡಿದಂತಾಗುತ್ತದೆ ಎಂದು ವಿಜಯ್ ಹೇಳಿದ್ದಾರೆ.

ಇದು ಹಣಕಾಸು ವಿತರಣೆಯ ಮೇಲೂ ಪರಿಣಾಮ ಬೀರಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಈಗಾಗಲೇ ಕೇಂದ್ರದಿಂದ ಸಾಕಷ್ಟು ಅನುದಾನ ಮತ್ತು ಯೋಜನೆಗಳನ್ನು ಪಡೆಯುತ್ತಿಲ್ಲ ಎಂದು ಆರೋಪಿಸುತ್ತಿದೆ. ಕ್ಷೇತ್ರಗಳ ಪುನರ್​ ವಿಂಗಡಣೆ ಬಳಿಕ ಇದು ಇನ್ನಷ್ಟು ಹದಗೆಡಬಹುದು ಎಂದು ಎಂದಿರುವ ವಿಜಯ್ ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

Home add -Advt


Related Articles

Back to top button