Kannada NewsKarnataka NewsLatestPolitics

*ಸತೀಶ್ ಜಾರಕಿಹೊಳಿ ತಮ್ಮನ್ನು ಭೇಟಿಯಾದ ಕಾರಣ ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸಚಿವ ಸತೀಶ್ ಜಾರಕಿಹೊಳಿ ತಮ್ಮನ್ನು ಭೇಟಿ ಮಾಡಿರುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರೋಡ್ ಬಗ್ಗೆ ಮಾತಾಡಿದ್ದು, ನೆಲ ಮಂಗಲದಲ್ಲಿ ಸಮಸ್ಯೆ ಆಗ್ತಿದೆ ಎಂದಿದ್ದಾರೆ. ಎರಡನೇದಾಗಿ ರಾಜಕಾರಣ ದ ಬಗ್ಗೆ ಮಾತಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಪಕ್ಷದ ಅಭಿವೃದ್ಧಿಗೆ ಏನು ಬೇಕು ಎನ್ನುಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್​ ಮುಸ್ಲಿಂ ನಾಯಕರ ವಿರುದ್ಧ ಹೈಕಮಾಂಡ್ ಕ್ರಮ ಸಂಬಂಧವೂ ಪ್ರತಿಕ್ರಿಯಿಸಿದ ಅವರು, ನನ್ನ ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಎಲ್ಲವೂ ಪಾರ್ಟಿ ನಿರ್ಧಾರ, ಪಾರ್ಟಿಗೆ ತನ್ನದೇ ಆದ ವರದಿ ಇದೆ. ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಎಲ್ಲರೂ ನನ್ನ ಮೇಲೆ ಹೇಳಬಹುದು, ಅದರ ಬಗ್ಗೆ ನನಗೆ ಚಿಂತೆ ಇಲ್ಲ. ಪಕ್ಷದ ಶಿಸ್ತಲ್ಲಿ ನಾವು ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ವರ್ಗಕ್ಕೆ ನ್ಯಾಯ ಕೊಡುವುದಕ್ಕೆ ಇರೋದೆ ಕಾಂಗ್ರೆಸ್ ಪಕ್ಷ ಎಂದು ತಿಳಿಸಿದ್ದಾರೆ.

Related Articles

Back to top button