Belagavi NewsBelgaum NewsKarnataka NewsLatest

*ಸವದತ್ತಿ ಜಾತ್ರೆಯಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸವದತ್ತಿ: ಸವದತ್ತಿ ಪಟ್ಟಣದಲ್ಲಿ 44 ವರ್ಷಗಳ ಬಳಿಕ ನಡೆಯುತ್ತಿರುವ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಪಾಲ್ಗೊಂಡು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.


ಅತ್ಯಂತ ಭಕ್ತಿ, ಸಡಗರದಿಂದ ಗ್ರಾಮದೇವಿಯ ಜಾತ್ರೆ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದಾರೆ. ಗ್ರಾಮ ದೇವಿ ಸವದತ್ತಿ ಪಟ್ಟಣಕ್ಕೆ ಹಾಗೂ ಭಕ್ತರಿಗೆ ಸನ್ಮಂಗಳವನ್ನುಂಟು ಮಾಡಲಿ, ಮಳೆ, ಬೆಳೆ ಉತ್ತಮವಾಗಿ ಜನರು ಸುಖದಿಂದ ಬಾಳುವಂತಾಗಲಿ ಎಂದು ಚನ್ನರಾಜ ಹಟ್ಟಿಹೊಳಿ ಪ್ರಾರ್ಥಿಸಿದರು.

ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button