Belagavi NewsBelgaum NewsCrimeKannada NewsKarnataka NewsNational

*ನಾಳೆ ನನ್ನ ಹೆಂಡತಿ ಮದುವೆ ಇದೆ, ನಿಲ್ಲಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಳೆ ನನ್ನ ಹೆಂಡತಿ ಮದುವೆ ಇದೆ, ದಯವಿಟ್ಟು ಆ ಮದುವೆ ನಿಲ್ಲಿಸಿ ಎಂದು ಪತಿ ಮಾಧ್ಯಮಗಳ ಮುಂದೆ ತನ್ನ ಅಳಲು ತೊಡಿಕೊಂಡಿರುವ ಘಟನೆ ನಡೆದಿದೆ. 

ಕಳೆದ 2016ರಿಂದ ಪರಿಚಯವಾಗಿದ್ದ ಮಹಿಳೆಯನ್ನು 2022ರಲ್ಲಿ ಮದುವೆಯಾಗಿದ್ದೇನೆ. ಆದರೆ ಇದೀಗ ಆಕೆಯ ಮನೆಯವರು ಕಿರುಕುಳ ನೀಡಿ, ಮತ್ತೊಬ್ಬರೊಂದಿಗೆ ಮದುವೆ ಮಾಡಲು ಮುಂದಾಗಿದ್ದಾರೆ ಎಂದು ವೆಂಕಟೇಶ್ವರ ರಾಠೋಡ್ ಎನ್ನುವವರು ಆರೋಪಿಸಿದ್ದಾರೆ.

ಹಿರೆಬಾಗೇವಾಡಿಯ ರುದ್ರಪ್ಪ ಹಂಚಿನಮನಿ ಹಾಗೂ ಅವರ ಪುತ್ರ ಪ್ರದೀಪ್ ಹಂಚಿನಮನಿ ತಮ್ಮ ಪತ್ನಿ ಮಂಜುಳಾ ಹಂಚಿನಮನಿಯನ್ನು ಮನೆಯಲ್ಲೇ ಕೂಡಿಹಾಕಿ ಇಟ್ಟಿದ್ದಾರೆ. 

ಜೊತೆಗೆ ನನ್ನ ವಿರುದ್ಧ ಇಲ್ಲಸಲ್ಲದ ಪ್ರಕರಣಗಳನ್ನು ದಾಖಲಿಸಿ ಷಡ್ಯಂತ್ರ ರೂಪಿಸಿ ಜೈಲಿಗೂ ಕಳುಹಿಸಿದ್ದರು. “ನಾನು ಹಾಗೂ ನನ್ನ ಹೆಂಡತಿ ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದೇವೆ. ಆದರೆ ಈಗ ಆಕೆಯನ್ನು ಮತ್ತೊಬ್ಬರಿಗೆ ಮದುವೆ ಮಾಡಲು ಯತ್ನಿಸಲಾಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು.

Home add -Advt

ಇತ್ತೀಚೆಗೆ ಹಿರೆಬಾಗೇವಾಡಿಯಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿ, ಬಂಗಾರ ಹಾಗೂ ಹಣ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿದ ವೆಂಕಟೇಶ್ವರ ರಾಠೋಡ್, ಈ ಕುರಿತು ಹಿರೆಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹೇಳಿದರು.

Related Articles

Back to top button