
ಪ್ರಗತಿವಾಹಿನಿ ಸುದ್ದಿ: ಕೊನೆಗೂ ಕಾಂಗ್ರೆಸ್ ಕೇರಳಂ ರಾಜ್ಯದ ನೂತನ ಮುಂಖ್ಯಮಂತ್ರಿ ಆಯ್ಕೆ ಮಾಡಿದೆ. ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನೂತನ ಮುಖ್ಯಮಂತ್ರಿ ವಿ.ಡಿ.ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.
ಕೇರಳಂ ರಾಜ್ಯಾದ್ಯಂತ ಸಾರ್ವಜನಿಕ ಜನಬೆಂಬಲ ಹೆಚ್ಚಿರುವ ಹಿನ್ನೆಲೆಯಲ್ಲಿ ವಿ.ಡಿ.ಸತೀಷನ್ ಅವರನ್ನು ನೂತನ ಸಿಎಂ ಆಗಿ ವಿ.ಡಿ.ಸತೀಷನ್ ಅವರನ್ನು ಎಐಸಿಸಿ ನಾಯಕರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ವಿ.ಡಿ.ಸತೀಶನ್ ಪರವೂರು ಕ್ಷೇತ್ರದ ಶಾಸಕರಾಗಿದ್ದು, ಈ ಕ್ಷೇತ್ರದಿಂದ ಸತೀಷನ್ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2021ರಲ್ಲಿ ಕೇರಳಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕೂಡ ಆಗಿದ್ದವರು. ಈ ಹಿನ್ನೆಲೆಯಲ್ಲಿ ನೂತನ ಸಿಎಂ ಆಗಿ ಸತೀಷನ್ ಅವರನ್ನು ಆಯ್ಕೆ ಮಾಡಲಾಗಿದೆ.


