
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ವೇಳೆ ದರ್ಶನ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ.
ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಮುಖ ಸಾಕ್ಷಿಗಳ ವಿಚಾರಣೆಗೆ ಇನ್ನೂ ಒಂದು ವರ್ಷ ಬೇಕು. ಹಾಗಾಗಿ ಆರೋಪಿ ದರ್ಶನ್ ಗೆ ಜಾಮೀನು ಮಂಜೂರು ಮಾಡಿದರೆ ಸಾಕ್ಷ್ಯನಾಶವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡದಂತೆ ಸರ್ಕಾರದ ಪರವಕೀಲರು ಮನವಿ ಮಾಡಿದ್ದಾರೆ.
ಒಂದು ವರ್ಷದೊಳಗೆ 60 ಪ್ರಮುಖ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಿ. ಒಂದು ವರ್ಷದಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದರೆ ಜಾಮೀನು ಅರ್ಜಿ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಗೆ ಇನ್ನೂ ಒಂದು ವರ್ಷ ಜೈಲು ವಾಸ ಖಾಯಂ ಆಗಿದೆ.


