Kannada NewsKarnataka NewsLatestSports

*ಕ್ರಿಕೆಟಿಗ ಎಸ್.ಎಲ್.ಅಕ್ಷಯ್ ಹೃದಯಾಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ಕ್ರಿಕೆಟ್ ಪಂದ್ಯದ ವೇಲೆಯೇ ಕ್ರಿಕೆಟಿಗ ಎಸ್.ಎಲ್.ಅಕ್ಷಯ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅವರಿಗೆ ಕೇವಲ 36 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಎಸ್ ಎಲ್ ಎಸ್ ಮೈದಾನದಲ್ಲಿ ಕೆ.ಎಸ್.ಸಿ.ಎ ಲೀಗ್ ಪಂದ್ಯಾವಳಿ ನಡೆಯುತ್ತಿತ್ತು. ನಸೂರ್ ಸ್ಮಾರಕ ಶೀಲ್ಡ್ ನ ಏಕದಿನ ಲೀಗ್ ಪಂದ್ಯಾಟದ ವೇಳೆ ಅಕ್ಷಯ್ 4 ಓವರ್ ಬೌಲಿಂಗ್ ಮಾಡಿದ್ದರು. ಬಳಿಕ ಆರೋಗ್ಯ ಸಮಸ್ಯೆ ಇದೆ ಎಂದು ಅರ್ಧಕ್ಕೆ ಪಂದ್ಯದಿಂದ ಹೊರಬಂದು ನೀರು ಕುಡಿಯುತ್ತಿದ್ದರು.

ನೀರು ಕುಡಿಯುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button