Karnataka NewsLatestPolitics

*ರಾಜೀನಾಮೆ ಬಗ್ಗೆ ಸುಳಿವು ನೀಡದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೆಹರೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ನೆಹರೂ ಬಗ್ಗೆ ಮಾತನಾಡಿದರು. ಈ ವೇಳೆ ಮಾಧ್ಯಮಗಳು ದೆಹಲಿಯಲ್ಲಿ ಹೈಕಮಾಂಡ್ ಸಭೆಯ ಕುರಿತಾದ ಪ್ರಶ್ನೆ ಗೆ ಉತ್ತರಿಸಿದ ಅವರು, ನಾಳೆ ಮಾತನಾಡುತ್ತೇನೆ ಎಂದರು.

ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ಕೇಳಿದಾಗ ನಾಳೆ ಎಲ್ಲವನ್ನೂ ಮಾತನಾಡುತ್ತೇನೆ ಎಂದಷ್ಟೇ ಹೇಳಿ ಸ್ಥಳದಿಂದ ತೆರಳಿದರು. ಈ ಮೂಲಕ ರಾಜೀನಾಮೆಯ ವಿಚಾರದ ಬಗ್ಗೆ ಯಾವುದೇ ಸುಳಿವು ನೀಡಿಲ್ಲ.

Home add -Advt


ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

:
ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು.

ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು

ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರೂ ಅವರು ಕಾರಣಕರ್ತರು ಎಂದರು.

ನೆಹರೂ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಅವರನ್ನು ಸ್ಮರಿಸಿ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು.ಅವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ ಎಂದರು.

Related Articles

Back to top button