
ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರು, ಅಭಿಮಾನಿಗಳು ಇದ್ದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


