
ಪ್ರಗತಿವಾಹಿನಿ ಸುದ್ದಿ: ಲಾಡ್ಜ್ ರೂಮಿನಲ್ಲಿ ಉಪತಹಶಿಲ್ದಾರ್ ಓರ್ವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಹಾಸನ ನಗರದ ಬಿಎಂ ರಸ್ತೆ ಲಾಡ್ಜ್ ನಲ್ಲಿ ತಿಮ್ಮಯ್ಯ (52) ಎಂಬ ಉಪತಹಶಿಲ್ದಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ, ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈಗ ಹಾಸನ ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೂ ಮುನ್ನ ಅವರು ಬರೆದಿಟ್ಟಿರುವ 4 ಪುಟದ ಡೆತ್ನೋಟ್ ಪತ್ತೆಯಾಗಿದೆ. ಆದರೆ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




