
ಸಿದ್ದರಾಮಯ್ಯಗೆ ಕಾಂಗ್ರೆಸ್ನಲ್ಲಿ ರಾಷ್ಟ್ರ ಮಟ್ಟದ ಜವಾಬ್ದಾರಿ;
ನವದೆಹಲಿ, ಜೂನ್ 2: ಕರ್ನಾಟಕದ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅವರಿಗೆ ಪಕ್ಷದಲ್ಲಿ ಮಹತ್ವದ ರಾಷ್ಟ್ರ ಮಟ್ಟದ ಜವಾಬ್ದಾರಿ ನೀಡಲಾಗಿದೆ.
ಈ ಕುರಿತು ಅವರು ಮಂಗಳವಾರ ಸಂಜೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಅವರ ನಿರ್ದೇಶನದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅವರನ್ನು ಕಾಂಗ್ರೆಸ್ನ ಅತ್ಯುನ್ನತ ನೀತಿ ನಿರ್ಧಾರಕ ವೇದಿಕೆಯಾಗಿರುವ (ಸಿಡಬ್ಲ್ಯುಸಿ) ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಅವರು ಮಂಗಳವಾರ ಸಂಜೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಅವರ ನಿರ್ದೇಶನದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಾಂಗ್ರೆಸ್ ಪಕ್ಷದ ನೀತಿ ರೂಪಣೆ, ಮಹತ್ವದ ರಾಜಕೀಯ ತೀರ್ಮಾನಗಳು ಹಾಗೂ ರಾಷ್ಟ್ರೀಯ ಮಟ್ಟದ ಕಾರ್ಯತಂತ್ರಗಳನ್ನು ನಿರ್ಧರಿಸುವ ಅತ್ಯುನ್ನತ ಸಮಿತಿಯಾಗಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿಯಲ್ಲಿ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಿರುವುದು ಅವರ ರಾಜಕೀಯ ಅನುಭವ ಮತ್ತು ಸಂಘಟನಾ ಸಾಮರ್ಥ್ಯಕ್ಕೆ ದೊರೆತ ಗೌರವ ಎಂದು ವಿಶ್ಲೇಷಿಸಲಾಗುತ್ತಿದೆ.
ಕರ್ನಾಟಕ ರಾಜಕೀಯದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿರುವ ಸಿದ್ದರಾಮಯ್ಯ ಅವರು ಶಾಸಕರಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಹಾಗೂ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವಲ್ಲಿ ಹಾಗೂ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ ಬೆನ್ನಲ್ಲೇ ಅವರಿಗೆ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ನೀಡಿರುವುದು ಕಾಂಗ್ರೆಸ್ ಹೈಕಮಾಂಡ್ ಅವರ ಅನುಭವವನ್ನು ದೇಶವ್ಯಾಪಿ ಮಟ್ಟದಲ್ಲಿ ಬಳಸಿಕೊಳ್ಳಲು ಮುಂದಾಗಿದೆ ಎಂಬ ಸಂದೇಶವನ್ನು ರವಾನಿಸಿದೆ.
ರಾಜ್ಯ ರಾಜಕೀಯ ವಲಯದಲ್ಲಿ ಈ ಬೆಳವಣಿಗೆಗೆ ವಿಶೇಷ ಮಹತ್ವ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನದಿಂದ ಹೊರಬಂದ ಬಳಿಕ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ಪಾತ್ರದ ಬಗ್ಗೆ ವಿವಿಧ ಊಹಾಪೋಹಗಳು ವ್ಯಕ್ತವಾಗಿದ್ದವು. ಇದೀಗ ಸಿಡಬ್ಲ್ಯುಸಿ ಸದಸ್ಯರಾಗಿ ನೇಮಕಗೊಂಡಿರುವುದರಿಂದ ಅವರು ರಾಷ್ಟ್ರೀಯ ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸದಸ್ಯತ್ವವು ಪಕ್ಷದ ಅತ್ಯಂತ ಪ್ರಭಾವಶಾಲಿ ಹುದ್ದೆಗಳಲ್ಲಿ ಒಂದಾಗಿದ್ದು, ದೇಶದ ರಾಜಕೀಯ ಬೆಳವಣಿಗೆಗಳು, ಚುನಾವಣೆಗಳು, ಸಂಘಟನೆ ಬಲವರ್ಧನೆ ಮತ್ತು ನೀತಿ ನಿರ್ಧಾರಗಳಲ್ಲಿ ಸದಸ್ಯರು ಪ್ರಮುಖ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ನೀಡಲಾದ ಈ ಜವಾಬ್ದಾರಿ ಕಾಂಗ್ರೆಸ್ ಪಕ್ಷದಲ್ಲಿ ಅವರ ರಾಜಕೀಯ ಮಹತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಸಿದ್ದರಾಮಯ್ಯ ಅವರ ನೇಮಕಕ್ಕೆ ಕರ್ನಾಟಕ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದು, ರಾಜ್ಯದ ನಾಯಕನಿಗೆ ರಾಷ್ಟ್ರ ಮಟ್ಟದಲ್ಲಿ ದೊರೆತಿರುವ ಈ ಗೌರವ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.




