Belagavi NewsBelgaum NewsKannada NewsKarnataka News
*ಗಂಡು ಶಿಶುವಿಗೆ “ಯತೀನ್” ಎಂದು ನಾಮಕರಣ ಮಾಡಿದ ಜಿಲ್ಲಾಧಿಕಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವಿಶೇಷ ದತ್ತು ಕೇಂದ್ರದಲ್ಲಿ ದಾಖಲಾಗಿರುವ 2 ತಿಂಗಳಿನ ನವಜಾತ ಗಂಡು ಶಿಶುವಿಗೆ ಜೂನ್ 5 ಶುಕ್ರವಾರದಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಶಾಸ್ತ್ರೋಕ್ತವಾಗಿ “ಯತೀನ್” ಎಂಬ ಹೆಸರಿನ ಮೂಲಕ ನಾಮಕರಣ ಮಾಡಿದರು.
ಜಿಲ್ಲಾಧಿಕಾರಿಗಳು ಮಗುವಿಗೆ ಹೆಸರಿಡುವ ಮೂಲಕ ಮಗುವಿನ ಆರೈಕೆ ಮತ್ತು ಕಾನೂನು ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿ, ಮಗುವಿನ ಮುಂದಿನ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಎಂ. ಎನ್. ಚೇತನ ಕುಮಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಮೂರ್ತಿ ಕೆ.ವಿ. ಸೇರಿದಂತೆ ಘಟಕದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


