
ಪ್ರಗತಿವಾಹಿನಿ ಸುದ್ದಿ: ನಿಕಟಪೂರ್ವ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿದ್ದ ಸಲಹೆಗಾರರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ವಿ ಪ್ರಭಾಕರ್, ವೈದ್ಯಕೀಯ ಸಲಹೆಗಾರರಾಗಿದ್ದ ಡಾ.ಹೆಚ್.ರವಿಕುಮಾರ್ ಹಾಗೂ ಆರ್ಥಿಕ ಸಲಹೆಗಾರರಾಗಿದ್ದ ಬಸವರಾಜ್ ರಾಯರೆಡ್ಡಿ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇವರನ್ನು ನೇಮಿಸಿಕೊಂಡಿದ್ದರು.




