Kannada NewsKarnataka NewsNationalPolitics

*ಕಾಂಗ್ರೆಸ್ ರಾಜ್ಯ ಸಭಾ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕೈ ನಾಯಕರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕ್ರಿಮಿನಲ್ ಪ್ರಕರಣವನ್ನು ನಮೂದಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ರಾಜ್ಯಸಭಾ ನಾಮಪತ್ರ ತಿರಸ್ಕೃತಗೊಂಡಿದೆ. ಚುನಾವಣೆಗೂ ಮುನ್ನವೇ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ. 

ಮಧ್ಯಪ್ರದೇಶದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಪರಿಶೀಲನೆ ಪ್ರಕ್ರಿಯೆ ವೇಳೆ ತಿರಸ್ಕರಿಸಲಾಗಿದೆ. ಇದರೊಂದಿಗೆ ರಾಜ್ಯದ ಮೂರನೇ ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧೆ ಕೊನೆಗೊಂಡಿದೆ. 

ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿರುವುದರಿಂದ, ಬಿಜೆಪಿಯ ಮಹೇಶ್ ಕೆವಾಟ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಕೂಲಂಕಷ ತನಿಖೆಯ ನಂತರ, ಚುನಾವಣಾಧಿಕಾರಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. 

ಹೈದರಾಬಾದ್ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣದ ಬಗ್ಗೆ ಮೀನಾಕ್ಷಿ ನಟರಾಜನ್ ತಮ್ಮ ನಾಮಪತ್ರದಲ್ಲಿ ಮಾಹಿತಿ ಮರೆಮಾಚಿಸಿದ್ದಾರೆ ಎಂದು ಆರೋಪಿಸಿ ನಾಮಪತ್ರ ತಿರಸ್ಕರಿಸಲಾಗಿದೆ.

Home add -Advt

ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ನಂತರ ಮಂಗಳವಾರ ಸಂಜೆ ಚುನಾವಣಾ ಆಯೋಗದ ಕಚೇರಿ ಹೊರಗೆ ಹಿರಿಯ ಕಾಂಗ್ರೆಸ್ ನಾಯಕರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅನುಮತಿ ಇಲ್ಲದ ಕಾರಣ ಕಚೇರಿಗೆ ಪ್ರವೇಶಿಸುವುದನ್ನು ತಡೆಯಲಾಯಿತು ಎಂದು ಮೂಲಗಳು ತಿಳಿಸಿವೆ.

ಈ ವಿವಾದ ನಿರ್ವಚನ ಸದನ ಗೇಟ್‌ನಲ್ಲಿ ಕಾಂಗ್ರೆಸ್ ನಾಯಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ದೀರ್ಘ ವಾಗ್ವಾದಕ್ಕೆ ಕಾರಣವಾಯಿತು. ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಹೊರಗೆ ಗೊಂದಲವನ್ನು ಸೃಷ್ಟಿಸಿತು.

Related Articles

Back to top button