Kannada NewsKarnataka NewsLatest

*ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.

Home add -Advt

ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಆಗಮಿಸಿದ ಸಿಎಂ ವಿಜಯ್, ವಿಶೇಷ ಪೂಜೆ ಸಲ್ಲಿಸಿ ತಾಯಿ ದರ್ಶನ ಪಡೆದರು. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ ಪಾತ್ರರಾದರು.

ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ.

Related Articles

Back to top button