Karnataka NewsLatestPolitics

*ರಾಜ್ಯದಲ್ಲಿ ಮತ್ತೆ ಆರಂಭವಾಯ್ತು ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ನಾಳೆ ರೆಸಾರ್ಟ್ ಗೆ ಶಿಫ್ಟ್*

ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿ


ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಶುರುವಾದಂತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಡ್ಡಮತದಾನದ ಭೀತಿ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತನ್ನ ಎಲ್ಲಾ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲು ಮುಂದಾಅಗಿದೆ.

ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಕಾಂಗ್ರೆಸ್​​ ಬಿಡದಿಯ ವಂಡರ್‌ಲಾ ರೆಸಾರ್ಟ್‌ಗೆ ಶಾಸಕರನ್ನು ಶಿಫ್ಟ್ ಮಾಡಲು ನಿರ್ಧರಿಸಿದೆ. ಅಲ್ಲಿಯೇ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿಯನ್ನೂ ಹಮ್ಮಿಕೊಂಡಿದೆ.

Home add -Advt

ಈಗಾಗಲೇ ರೆಸಾರ್ಟ್ ನಲ್ಲಿ ಒಟ್ಟು 140 ರೂಂ ಬುಕ್ಕಿಂಗ್ ಆಗಿದೆ. ನಾಳೆ ಹಾಗೂ ನಾಡಿದ್ದು ಕಾಂಗ್ರೆಸ್ ಶಾಸಕರು ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿದೆ ಎನ್ನಲಾಗಿದೆ. ಪಕ್ಷೇತರ ಶಾಸಕರನ್ನು ಕೂಡ ಹೆಚ್.​ಡಿ.ಕುಮಾರಸ್ವಾಮಿ ಸಂಪರ್ಕ ಮಾಡಿದ್ದಾರೆಂಬ ಅನುಮಾನ ಹಿನ್ನೆಲೆಯಲ್ಲಿ ಶಾಸಕರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಕಸರತ್ತು ಶುರುವಾಗಿದೆ.

ಜೂ.18ರಂದು ತಂಡ ತಂಡವಾಗಿ ತೆರಳಲಿರುವ ಕಾಂಗ್ರೆಸ್​​ ಶಾಸಕರು, ನೇರವಾಗಿ ವಿಧಾನಸೌಧಕ್ಕೆ ಬಂದು ಮತದಾನ ಮಾಡಲಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್​ ಸಿಎಂ ಆದ ಬಳಿಕ ಮೊದಲ ಸಿಎಲ್​ಪಿ ಸಭೆ ನಾಳೆ ಸಂಜೆ 6 ಗಂಟೆಗೆ ಬಿಡದಿಯ ವಂಡರ್​ಲಾ ರೆಸಾರ್ಟ್​ನಲ್ಲಿಯೇ ನಡೆಯಲಿದೆ. ಸಿಎಲ್​ಪಿ ಸಭೆಯಲ್ಲಿ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿ ನಡೆಯಲಿದೆ.

Related Articles

Back to top button