
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧನಸೌಧದಲ್ಲಿ ಮತದಾನ ಮಾಡಿದರು.
ವಿಧಾನಸೌಧದ 106ನೇ ಕೊಠಡಿಯಲ್ಲಿ ಪರಿಷತ್ ಚುನಾವಣೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮತದಾನ ಮಾಡಿದರು.
ವಿಧಾನ ಪರಿಷತ್ ಚುನಾವಣೆಗೆ ಮತದಾನದ ಸಮಯ ಮುಕ್ತಾಯವಾಗಿದ್ದು, ಬಸವರಾಜ್ ರಾಯರೆಡ್ಡಿ ಕೊನೇ ಕ್ಷಣದಲ್ಲಿ ಮತದಾನ ಮಾಡಿದ್ದಾರೆ. ಇಂದು ಸಂಜೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಬಳಿಕ ಫಲಿತಾಂಶ ಪ್ರಕಟವಾಗಲಿದೆ.




