Kannada NewsKarnataka NewsNational

*ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾದ ಸಿಎಂ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ : ಆದಿಚುಂಚನಗಿರಿ ಶಾಖಾ ಮಠದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾದರು. 

ಬೆಂಗಳೂರಿನ ವಿಜಯನಗರದಲ್ಲಿರುವ ಮಠಕ್ಕೆ ತೆರಳಿ ಅವರು  ಸೋಮವಾರ ರಾತ್ರಿ ಭೇಟಿಯಾದರು. ಈ ಸಂದರ್ಭದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಶಾಸಕ ರವಿ ಗಣಿಗ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.

Home add -Advt

ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿದ್ದರಿಂದ, ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆಯೇ ಹೊರತು ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸಚಿವರು ಮತ್ತು ಶಾಸಕರು ತಿಳಿಸಿದ್ದಾರೆ.

Related Articles

Back to top button