Karnataka NewsLatestNational
*ರೈಲು ನಿಲ್ದಾಣದಲ್ಲಿ ಘೋರ ದುರಂತ: ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚರ್ಲಪಲ್ಲಿ-ಷಾಲಿಮಾರ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸ್ಆವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಏಲೂರು ಬಳಿ ನಡೆದಿದೆ.
ಇಲ್ಲಿನ ಉಂಗುಟೂರು ಮಂಡಲದ ಚೇಬ್ರೋಲು ರೈಲು ನಿಲ್ದಾಣದಲ್ಲಿ ಈ ದುರಂತ ನಡೆದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು, ಓರ್ವ ಯುವಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿದ್ದಾಗಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ನಿಲ್ದಾಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.




