Kannada NewsKarnataka NewsLatest

*SIR ಕರ್ತವ್ಯದ ವೇಳೆ ಕುಸಿದು ಬಿದ್ದ BLO: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- SIR ಕರ್ತವ್ಯಕ್ಕೆ ತೆರಳಿದ್ದ ಬಿಎಲ್ ಒ ಓರ್ವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಸ್ ಐಆರ್ ಗೆ ತೆರಳುವಾಗ ತುಮಕೂರಿನಲ್ಲಿ ಬೈಕ್​​​ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಎಒ ಭುವನಾ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇದೀಗ ಬೀದರ್ ನಲ್ಲಿ ಈ ಘಟನೆ ನಡೆದಿದೆ.

ಬೀದರ್ ತಾಲೂಕಿನ ಅಮಲಾಪುರದಲ್ಲಿ ಬಿಎಲ್ ಒ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ಮೂಲದವರಾಗಿರುವ ಸುನೀಲ್​​ (40) ಮೃತರು ಎಂದು ಗುರುತಿಸಲಾಗಿದೆ.

ಬೀದರ್ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಸರ್ವೇ ನಡೆಸುತ್ತಿದ್ದ ವೇಳೆ ತೀವ್ರ ಎದೆನೋವಿನಿಂದ ಸುಸ್ತಾಗಿ ಸುನೀಲ್​​ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಸ್ಟಂಟ್ ಅಳವಡಿಸುವ ವೇಳೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಗಾಂಧಿ‌ಗಂಜ್ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ‌ ನಡೆದಿದೆ.

Home add -Advt

Related Articles

Back to top button