HealthKannada NewsKarnataka NewsNationalPolitics
*ಹೆದ್ದಾರಿಯಲ್ಲಿ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ.ಖಾದರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಕುಮಟಾದಲ್ಲಿ ಮಾತನಾಡಿದ ಅವರು, ಅಪರಿಚಿತ ವ್ಯಕ್ತಿಗೆ ಅಪಘಾತ ಆದಾಗ ಉಚಿತ ಚಿಕಿತ್ಸೆ ನೀಡುವ ಯೋಜನೆ ಜಾರಿಗೊಳಿಸುತ್ತೇವೆ. ಪ್ರಥಮ 7 ದಿನ ಎರಡೂವರೆ ಲಕ್ಷ ತನಕ ಉಚಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.
ಈ ಯೋಜನೆಗೆ ಮುಖ್ಯಮಂತ್ರಿಗಳು ಒಪ್ಪಿಗೆ ಕೊಡುವ ವಿಶ್ವಾಸವಿದೆ. ವಿದೇಶ, ದೇಶ, ರಾಜ್ಯದ ಎಲ್ಲರಿಗೂ ಈ ಯೋಜನೆ ಅನ್ವಯ ಆಗುತ್ತದೆ. ಆ್ಯಕ್ಸಿಡೆಂಡ್ ಇನ್ಷುರೆನ್ಸ್ ಸ್ಕೀಂ ಎಂದು ಸಾಂತ್ವನ ಯೋಜನೆ ಜಾರಿಗೊಳಿಸಿದ್ದೆವು. ಆಮೇಲೆ ಕೇಂದ್ರದವರು ಅದನ್ನು ಕಾಪಿ ಮಾಡಿ ಪ್ರಾರಂಭ ಮಾಡಿದ್ರು. ಆದರೆ, ಎರಡೂವರೆ ಲಕ್ಷ ತನಕ ನಾವು ಇದನ್ನು ಜಾಸ್ತಿ ಮಾಡಿ ನೀಡುತ್ತೇವೆ ಎಂದು ಹೇಳಿದರು.



