Karnataka NewsLatestPolitics
*ಸಿಎಂ ಆದ ಬಳಿಕ ಮೊದಲ ಬಾರಿ ಮೈಸೂರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್; ಬೃಹತ್ ಹಾರ, ತೆರೆದ ವಾಹನದಲ್ಲಿ ರೋಡ್ ಶೋ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಮೈಸೂರಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತಿಸಿದರು.
ಮೈಸೂರಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಬೃಹತ್ ಹಾರ ಹಾಕಿ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆದೊಯ್ದರು. ಸಂಸದ ಅನಿಲ್ ಚಿಕ್ಕಮಾಧು, ಶಾಸಕರಾದ ತನ್ವಿರ್ ಸೇಠ್, ಹರೀಶ್ ಗೌಡ, ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.




