Karnataka NewsLatestPolitics

*ನಾಗೇಂದ್ರನನ್ನು ವಾಷಿಂಗ್ ಮಷಿನ್ ಗೆ ಹಾಕಿ ಕ್ಲೀನ್ ಮಾಡಿದ್ದಾರೆ; ಮೊದಲು ವಜಾಗೊಳಿಸಬೇಕು: ಬಿಜೆಪಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಗರಣದ ಆರೋಪದಲ್ಲಿ ಸಚಿವ ಸ್ಥಾನಕ್ಕೆ ರಜೀನಾಮೆ ನೀಡಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಮತ್ತೆ ಸಚಿವ ಸ್ಥಾನ ನೀಡಿರುವುದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಧಾನಸಭೆ ವಿಪಕ್ಷ ನಾಯಕ ಆರ್​​. ಅಶೋಕ್​, ವಾಲ್ಮೀಕಿ ನಿಗಮದಲ್ಲಿನ ಹಗರಣ ಸಂಬಂಧ ಹೋರಾಟ ಮಾಡಿ ನಾವು ನಾಗೇಂದ್ರ ಅವರ ರಾಜೀನಾಮೆ ಕೊಡಿಸಿದ್ದೆವು. ಆದರೆ ಈಗ ಅವರನ್ನು ವಾಷಿಂಗ್​​ ಮಷಿನ್​​ಗೆ ಹಾಕಿ ಕ್ಲೀನ್​​ ಮಾಡಿದ್ದಾರೆ. ಮತ್ತೆ ಮಂತ್ರಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನೂತನ ಸಚಿವ ನಾಗೇಂದ್ರರನ್ನು ವಜಾ ಮಾಡುವಂತೆ ಆಗ್ರಹಿಸಿ ಪರಿಷತ್ ಸದಸ್ಯ ಲಿಂಗರಾಜ್ ಪಾಟೀಲ್ ನೇತೃತ್ವದಲ್ಲಿ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ. ವಾಲ್ಮೀಕಿ ನಿಗಮದ 187ಕೋಟಿ ನುಂಗಿದವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವ ಸಂಬಂಧ ಕಾಂಗ್ರೆಸ್​​ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

Related Articles

Back to top button