Belagavi NewsBelgaum NewsKannada NewsKarnataka NewsLatest

*ರಾಯರೇ ಆ ಹುಡುಗಿಯಿಂದ ಕಾಪಾಡಿ: ಬೆಳಗಾವಿಯಲ್ಲಿ ವಿಚಿತ್ರ ಘಟನೆ ಬೆಳಕಿಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡಿ” ಎಂದು ಯುವಕ ಪತ್ರ ಬರೆದು ಹುಂಡಿಯಲ್ಲಿ ಹಾಕಿ ಹೋಗಿರುವ ವಿಚಿತ್ರ ಘಟನೆ ನಡೆದಿದೆ.

ರಾಮದುರ್ಗದ ಪಡಕೋಟಗಲ್ಲಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇತ್ತಿಚೆಗೆ ಹುಂಡಿ ಎಣಿಕೆ ಮಾಡುವಾಗ ಈ ರೀತಿಯ ವಿಚಿತ್ರ ಪತ್ರವೊಂದು ಪತ್ತೆಯಾಗಿದೆ. 

ಪತ್ರದಲ್ಲಿ ಏನಿದೆ..?

ಪತ್ರದಲ್ಲಿ ಶ್ರೀ ಗಣಪತಿಯೇ ನಮಃ, ಓಂ ಶ್ರೀ ರಾಘವೇಂದ್ರಾಯ ನಮಃ, ರಾಯರೇ ನಮ್ಮನ್ನು ಆ ವಿಷದಿಂದ ಕಾಪಾಡು, ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡಿ, ರಾಯರೇ ಈ ಕಷ್ಟದಿಂದ ನಮ್ಮನ್ನು ಕಾಪಾಡಿ, ರಾಯರಿದ್ದಾರೆ ನಮ್ಮ ಜೊತೆ‌, ಹೀಗಾಗಿ ಅವರಲ್ಲಿ ನನ್ನ ಕಷ್ಟವನ್ನು ಕೇಳಿಕೊಳ್ಳುತ್ತಿದ್ದೇನೆ. ಗುರುಗಳೇ ಆದಿಶಕ್ತಿ ದೇವಿ, ತಂದೆ, ತಾಯಿ ಕಾಪಾಡು. ಧನ್ಯವಾದಗಳು ಅಂತಾ ಪತ್ರದಲ್ಲಿ ಬರೆಯಲಾಗಿದೆ. 

Home add -Advt

ಪತ್ರ ಬರೆದಿರುವ ವ್ಯಕ್ತಿಯ ಹೆಸರು, ವಿಳಾಸ ಸೇರಿ ಯಾವುದೇ ಮಾಹಿತಿಯು ಪತ್ರದಲ್ಲಿ ಉಲ್ಲೇಖವಾಗಿಲ್ಲ. ಆದ್ದರಿಂದ ಪತ್ರ ಬರೆದವರು ಯಾರು ಎಂಬುದು ತಿಳಿದುಬಂದಿಲ್ಲ. ಆದರೆ, ಈ ಅಪರೂಪದ ಮನವಿ ಪತ್ರ ಮಠದ ಸಿಬ್ಬಂದಿ ಹಾಗೂ ಭಕ್ತರನ್ನು ಚಕಿತಗೊಳಿಸಿದೆ.  ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಘಟನೆ ಕುರಿತು ಮಠದ ಉತ್ಸವ ಕಮೀಟಿ ಗೌರವಾಧ್ಯಕ್ಷ ಪವನ ದೇಶಪಾಂಡೆ ಮಾಹಿತಿ ನೀಡಿದ್ದು, ಪ್ರತಿ ಸಲದಂತೆ ನಾವು ಹುಂಡಿ ತೆಗೆದು, ಎಣಿಕೆ ಶುರು ಮಾಡಿದೇವು. ಆಗ ಈ ರೀತಿ ಪತ್ರ ಸಿಕ್ಕಿದ್ದು ನಮಗೆ ಆಶ್ಚರ್ಯ ತಂದಿದೆ. ಸಾಮಾನ್ಯವಾಗಿ ಎಲ್ಲ ಭಕ್ತರು ದೇವರಲ್ಲಿ ಆರೋಗ್ಯ, ಐಶ್ವರ್ಯ, ನೆಮ್ಮದಿ ಕರುಣಿಸುವಂತೆ ಪ್ರಾರ್ಥಿಸುತ್ತಾರೆ. ಆದರೆ, ಯಾರೋ ಅನಾಮಿಕ ವ್ಯಕ್ತಿ ಈ ರೀತಿ ದೇವರಲ್ಲಿ ಕೇಳಿಕೊಂಡಿರುವುದು ವಿಚಿತ್ರ ಸಂಗತಿ. ಇದು ನಮ್ಮ ಮಠದಲ್ಲಿ ನಡೆದ ಮೊದಲ ಪ್ರಕರಣ. ಪತ್ರ ಬರೆದವರು ಯಾರು ಅಂತಾ ಗೊತ್ತಾಗಿಲ್ಲ ಎಂದು ತಿಳಿಸಿದರು.

Related Articles

Back to top button