Belagavi NewsBelgaum NewsKannada NewsKarnataka NewsNationalPolitics

*ತವರಿನಲ್ಲಿ ಸಚಿವ ಲಕ್ಷ್ಮಣ ಸವದಿಗೆ ಅದ್ಧೂರಿ ಸ್ವಾಗತ*

ಪ್ರಗತಿವಾಹಿನಿ ಸುದ್ದಿ: ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವ ಕ್ಷೇತ್ರ ಅಥಣಿ ಪಟ್ಟಣಕ್ಕೆ ಆಗಮಿಸಿದ ಶಾಸಕ ಲಕ್ಷ್ಮಣ ಸವದಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಸೇರಿದಂತೆ ಹಲವು ಮುಖಂಡರು ಅವರಗೆ ಸಾಥ್ ನೀಡಿದರು.

ಸಾವಿರಾರು ಅಭಿಮಾನಿಗಳ ಸಂಭ್ರಮದ ನಡುವೆ ಅಥಣಿ ಪಟ್ಟಣಕ್ಕೆ ಆಗಮಿಸಿದ ಸವದಿಗೆ ಹೂವಿನ ಸುರಿಮಳೆ ಸುರಿಸುವ ಮೂಲಕ ಸ್ವಾಗತಿಸಲಾಯಿತು. ಈ ವೇಳೆ ಅಭಿಮಾನಿಗಳು ಜೈಕಾರ ಹಾಕಿ ಸಂಭ್ರಮಿಸಿದರು. ವಿಶೇಷವಾಗಿ 21 ಅಡಿ ಉದ್ದದ ಬೃಹತ್ ಆಪಲ್ ಹಾರ ಹಾಕಿ ಸವದಿ ಅವರನ್ನು ಅಭಿಮಾನಿಗಳು ಗೌರವಿಸಿದರು. 

Home add -Advt

ನೂತನ ಸಚಿವರಿಗೆ ಶುಭಾಶಯ ಕೋರಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಿಸಿದರು. ಅಥಣಿ ಪಟ್ಟಣದೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸವದಿಯ ಆಗಮನಕ್ಕೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ದೊರೆಯಿತು.

Related Articles

Back to top button