Film & EntertainmentKannada NewsKarnataka NewsNational
*ಜೈಲು ಹಕ್ಕಿ ಪವಿತ್ರಾ ಗೌಡ ಮಾಜಿ ಪತಿ ನಿಧನ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ಮೃತಪಟ್ಟಿರುವ ಸುದ್ದಿ ಹೊರಬಂದಿದೆ.
ಸಂಜಯ ಸಿಂಗ್ 8 ತಿಂಗಳ ಹಿಂದೆಯೇ ಸಾವಾಗಿದ್ದು, ಸದ್ಯ ಸಂಜಯ್ ಇನ್ನಿಲ್ಲ ಎಂಬ ಸುದ್ದಿ ಬಳಕಿಗೆ ಬಂದಿದೆ. ಹಲವಾರು ವರ್ಷಗಳಿಂದ ಅನಾರೋಗ್ಯ ತುತ್ತಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ರಾಜಸ್ಥಾನದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಚ್ಛೇದನದ ನಂತರ ಅವರು ಕುಡಿತಕ್ಕೆ ದಾಸನಾಗಿದ್ದರು. ಈ ಕುಡಿತವೇ ಅವರನ್ನು ಬಲಿ ತಗೆದುಕೊಂಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಬಂಧನವಾದಾಗ, ಸಂಜಯ್ ಸಿಂಗ್ ಬೆಂಗಳೂರಿಗೆ ಬಂದಿದ್ದರು.



