Karnataka NewsLatestPolitics
*ನಾಳೆ ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ನದಿ ನೀರು ವಿವಾದ ಕುರಿತು ಸುಪ್ರೀಂ ಕೋರ್ಟ್ ವಕೀಲರ ಜೊತೆ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಸಿಎಂ ಡಿ.ಕೆ. ಶಿವಕುಮಾರ್ ಅವರು ನಾಳೆ ಗುರುವಾರ (ಆ.27) ದೆಹಲಿಗೆ ಭೇಟಿ ನೀಡಲಿದ್ದಾರೆ. ಅವರ ಅಧಿಕೃತ ಪ್ರವಾಸ ಕಾರ್ಯಕ್ರಮ ಬಿಡುಗಡೆಯಾಗಿದೆ.
ಈ ಕುರಿತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಎಸ್. ಶ್ರೀಧರ್ ಅವರು ಅಧಿಕೃತ ಪ್ರವಾಸ ಕಾರ್ಯಕ್ರಮವನ್ನು ಬಿಡುಗಡೆ ಮಾಡಿದ್ದಾರೆ.
ನಾಳಿನ ಪ್ರವಾಸ ವಿವರ:
- ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ (AI 2654)
- ಬೆಳಗ್ಗೆ 9:55ಕ್ಕೆ ದೆಹಲಿ ತಲುಪಲಿದ್ದಾರೆ
- ಬೆಳಗ್ಗೆ 10:30ಕ್ಕೆ ಕೇಂದ್ರ ಸಚಿವರ ಭೇಟಿ
- ಮಧ್ಯಾಹ್ನ 2:30ಕ್ಕೆ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಕೀಲರ ಜೊತೆ ಸಭೆ
- ಸಂಜೆ 7:30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ (AI 2809)
- ರಾತ್ರಿ 10:20ಕ್ಕೆ ಬೆಂಗಳೂರಿಗೆ ಆಗಮನ
ಈ ವೇಳೆ ಕರ್ನಾಟಕ ಭವನದ ಅಧಿಕಾರಿಗಳಿಗೆ ಮತ್ತು ದೆಹಲಿ ಪೊಲೀಸರಿಗೆ ಅಗತ್ಯ ಭದ್ರತೆ ಮತ್ತು ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಸಿಎಂ ಜೊತೆ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್. ಶ್ರೀಧರ್ ಅವರು ಇರಲಿದ್ದಾರೆ.



