Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಆಸೀಫ್ ಸೇಠ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇರ್ ಅವರಿಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದರು.

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಕೋಟಾದಡಿ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಆಸೀಫ್ ಸೇರ್ ಬಲವಾಗಿ ಒತ್ತಾಯಿಸಿದ್ದರು. ಸಚಿವ ಸ್ಥಾನಕ್ಕಾಗಿ ಅವರು ಹಲವು ಬಾರಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೂ ಲಾಬಿ ನಡೆಸಿದ್ದರು. ಬೆಳಗಾವಿ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಮುಸ್ಲಿಂ ಧರ್ಮಗುರುಗಳು ಹಾಗೂ ಸಮುದಾಯದ ಮುಖಂಡರು ಕೂಡ ಸೇರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಬೃಹತ್ ಸಮಾವೇಶ ನಡೆಸಿದ್ದರು.

Home add -Advt

ಆದರೆ ಹಾಲಿ ಸಚಿವ ಸಂಪುಟದಲ್ಲಿ ಮತ್ತಷ್ಟು ಸ್ಥಾನ ಹೊಂದಾಣಿಕೆ ಮಾಡುವುದು ಕಷ್ಟವಾಗಿರುವ ಹಿನ್ನೆಲೆಯಲ್ಲಿ ಸೇರ್ ಅವರನ್ನು ಸಮಾಧಾನಪಡಿಸಲು ಬುಡಾ ಅಧ್ಯಕ್ಷ ಸ್ಥಾನದ ಅವಕಾಶ ನೀಡಲಾಗಿದೆ ಎನ್ನಲಾಗಿದೆ. ಈ ಮೂಲಕ ಸಚಿವ ಸ್ಥಾನದ ಬೇಡಿಕೆಯಿಂದ ಉಂಟಾಗಿದ್ದ ಅಸಮಾಧಾನವನ್ನು ತಣಿಸುವ ಪ್ರಯತ್ನ ನಡೆದಿದೆ.

ಅಧಿಕಾರ ಅವಹಿಸಿಕೊಂಡ ಶಾಸಕ ಆಸೀಫ್ ಸೇಠ್

ಬೆಳಗಾವಿ ನಗರ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಸಕ ಆಸೀಫ್ ಸೇಠ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಬೆಳಗಾವಿ ನಗರ ಅಭಿವೃದ್ದಿ ಪ್ರಾಧಿಕಾರ ಕಚೇರಿಯಲ್ಲಿ ಮಾಜಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅಧಿಕಾರ ಹಸ್ತಾಂತರಿಸಿದರು. ಹೂಗುಚ್ಚ ನೀಡಿ ಮಾಜಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಅಭಿನಂದಿಸಿದರು. ಆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ಫಿರೋಜ್ ಸೇಠ್ ಇದ್ದರು.

Related Articles

Back to top button