Belagavi NewsBelgaum NewsKannada NewsKarnataka News

*ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*: *ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್‌, ಬಸರಿಕಟ್ಟಿಯಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ*

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್‌, ಬಸರಿಕಟ್ಟಿಯಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ/
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್‌ಗೆ ಭೂಮಿಪೂಜೆ
ಹಿಂಡಲಗಾ ಗ್ರಾಮದ ಶ್ರೀ ರೇಣುಕಾ ಮಂದಿರದ ಆವರಣಕ್ಕೆ ಕಾಂಪೌಂಡ್ ವಾಲ್ ನಿರ್ಮಿಸುವ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಂಡ್ ವಾಲ್ ನಿರ್ಮಾಣವಾಗಲಿದೆ. ಮಂದಿರದ ಆವರಣದ ಸುರಕ್ಷತೆ ಹಾಗೂ ಅಚ್ಚುಕಟ್ಟಾದ ನಿರ್ವಹಣೆಗೆ ಅನುಕೂಲವಾಗುವಂತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಮೃಣಾಲ್ ಹೆಬ್ಬಾಳಕರ್, ಕ್ಷೇತ್ರದ ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವುದರ ಜೊತೆಗೆ ಗುಣಮಟ್ಟವನ್ನು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳದಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗಮನಹರಿಸಬೇಕು ಎಂದು ಸೂಚಿಸಿದರು.
ಕಾಮಗಾರಿಯಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು ಹಾಗೂ ನಿಗದಿತ ಮಾನದಂಡಗಳನ್ನು ಪಾಲಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ವಿಠ್ಠಲ ದೇಸಾಯಿ, ಗಜಾನನ ಕಾಕತ್ಕರ್, ಯಲ್ಲಪ್ಪ ಎಸ್., ಸಂಜು ಕಾಕತ್ಕರ್, ರಾಜು ಜಗತಾಪ್, ಸಚಿನ್ ಕಿಲ್ಲೇಕರ್, ಗುಂಡು ಎಂ., ಪರಶುರಾಮ, ಸುನಿಲ್ ಪಾವಸೆ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt


ಬಸರಿಕಟ್ಟಿಯಲ್ಲಿ 60 ಲಕ್ಷ ರೂ. ವೆಚ್ಚದ ಶಾಲಾ ಕೊಠಡಿಗಳ ಉದ್ಘಾಟನೆ


ಇದೇ ವೇಳೆ ಬಸರಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಮರಾಠಿ ಶಾಲೆಗಳಲ್ಲಿ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನಾಲ್ಕು ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಲಾಯಿತು.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಹೊಸ ಕೊಠಡಿಗಳ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಅಗತ್ಯವಾದ ತರಗತಿ ಕೊಠಡಿಗಳ ಸೌಲಭ್ಯ ದೊರೆಯಲಿದ್ದು, ಕನ್ನಡ ಹಾಗೂ ಮರಾಠಿ ಮಾಧ್ಯಮದ ವಿದ್ಯಾರ್ಥಿಗಳ ಕಲಿಕೆಗೆ ಮತ್ತಷ್ಟು ಅನುಕೂಲವಾಗಲಿದೆ.
ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸುರಕ್ಷಿತ ಹಾಗೂ ಉತ್ತಮ ವಾತಾವರಣ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮುಖಂಡರು ಹೇಳಿದರು.
ಕಾರ್ಯಕ್ರಮದಲ್ಲಿ ಸಿದ್ದರಾಯಿ ನಾಗರೊಳಿ, ಬಸವಣ್ಣಿ ಕೊಂಡಸಕೊಪ್ಪ, ಕೃಷ್ಣ ತೆರಳೆ, ರವಿ ಲೋಹಾರ್, ದಿಲೀಪ್, ಹೊಳೆಪ್ಪ ಪೂಜೇರಿ, ಪರಶುರಾಮ ಕಲ್ಲನಾಚೆ, ರಾಮಾ ಎಚ್., ಶ್ರೀಮತಿ ಜಳಕಿ ಸೇರಿದಂತೆ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗ್ರಾಮಗಳ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಶಿಕ್ಷಣ, ಧಾರ್ಮಿಕ ಕೇಂದ್ರಗಳು ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

Related Articles

Back to top button