CrimeKannada NewsKarnataka NewsLatest
*ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಹಾಡಹಗಲೇ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಲಿಂಗರಾಜನಗರದಲ್ಲಿರುವ ಸಿದ್ದೇಶ್ವರ ಪಾರ್ಕ್ ಬಳಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರ ಮುಂದೆಯೇ ದುಷ್ಕರ್ಮಿಗಳು ದಾಳಿ ನಡೆಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.
ಕೊಲೆಯಾದವರು ಯಾರು? ಕೊಲೆ ಮಾಡಿದವರು ಯಾರೆಂಬುದು ಇಬ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಶೃತಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷ್ನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



