CrimeKannada NewsKarnataka NewsLatestTravel
*ಎರಡು ಕಾರ್ಗಳ ನಡುವೆ ಮುಖಾಮುಕಿ ಡಿಕ್ಕಿ: ನಾಲ್ವರ ಸಾವು*

ಪ್ರಗತಿವಾಹಿನಿ ಸುದ್ದಿ: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುರುವೇಕೆರೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಿಯಾ ಕಾರು ಹಾಗೂ ಚಿಕ್ಕನಾಯಕನಹಳ್ಳಿ ಕಡೆಯಿಂದ ಬರುತ್ತಿದ್ದ ವೋಕ್ಸ್ವ್ಯಾಗನ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




