Karnataka NewsLatestPolitics
*ಕಿರುಕುಳ ನೀಡಿ ನನ್ನಿಂದ ರಾಜೀನಾಮೆ ಪಡೆದಿದ್ದಾರೆ: ಸಿಎಂ ವಿರುದ್ಧ ಬಸವರಾಜ್ ಹೊರಟ್ಟಿ ಅಸಮಾಧಾನ*

ಪ್ರಗತಿವಾಹಿನಿ ಸುದ್ದಿ: ನಾನು ನೋವಿನಿಂದಲೇ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಿರುಕುಳ, ಹಿಂಸೆ ನೀಡಿ ನನ್ನಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ ಎಂದು ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ನನ್ನ ರಾಜೀನಾಮೆ ಪಡೆಯಲು ಸ್ವತಃ ಸಿಎಂ ಬಂದು ಕುಳಿತಿದ್ದರು. ಸ್ಪೀಕರ್ ಕಚೇರಿಗೆ ಬಂದು ಒಂದೂವರೆ ತಾಸು ಕುಳಿತಿದ್ದರು. ಕಿರುಕುಳ ರೂಪದಲ್ಲಿ ನನ್ನ ರಾಜೀನಾಮೆ ಪಡೆದುಕೊಂಡಿದ್ದಾರೆ ಎಂದು ಸಿರೆಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಅವಧಿ ಮುಗಿಯುವ ಮುನ್ನವೇ ಒತ್ತಡ ಹೇರಿ ನನ್ನಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ. ಇದರಿಂದ ನನಗೆ ನೋವಾಗಿದೆ. ನೋವಿನಿಂದಲೇ ನಾನು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹೇಳಿದರು.




