CrimeKannada NewsKarnataka NewsLatest

*ಹಳಿ ದಾಟುತ್ತಿದ್ದಾಗ ಭೀಕರ ದುರಂತ: ರೈಲು ಡಿಕ್ಕಿಯಾಗಿ ಮಹಿಳೆ ಹಾಗೂ ಇಬ್ಬರು ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರೈಲು ಡಿಕ್ಕಿಯಾಗಿ ಓರ್ವ ಮಹಿಳೆ, ಇಬ್ಬರು ಮಕ್ಕಳು ಸೇರಿ ಮೂವರು ಸವನ್ನಪ್ಪಿರುವ ಘೋರ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ಇರ್ಫಾನಾ (46), ರುಕಿಯಾ (13) ಹಾಗೂ ರಾಕಿಯಾ (8) ಮೃತ ದುರ್ದೈವಿಗಳು. ಹಳಿ ದಾಟುತ್ತಿದ್ದಾಗ ಏಕಾಏಕಿ ರೈಲು ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರ ಮೃತದೇಹ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

Home add -Advt

ರಜೆ ಇದೆ ಎಂದು ಮೊಮ್ಮಕ್ಕಳು ಹಿಂದೂಪುರದಿಂದ ಅಜ್ಜಿಯ ಮನೆಗೆ ಬಂದಿದ್ದರು. ರಜೆ ಮುಗಿಸಿ ಊರಿಗೆ ತೆರಳುವಾಗ ಈ ದುರಂತ ಸಂಭವಿಸಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button