
ಮೂರನೆ ನೋಟಿಸ್ ಜಾರಿ
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಿಐಡಿ ಅಧಿಕಾಅರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಶಿವಶಂಕರಪ್ಪ ಸಾಹುಕಾರ್ ನಿನ್ನೆ ತಡರಾತ್ರಿ ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು ಎಂದು ತಿಳಿದುಬಂದಿದೆ. ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದು, ಯಾವುದೇ ತನಿಖೆಗೂ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ವಿಚಾರಣೆ ನಡೆಸಿ ಸಿಐಡಿ ಅಧಿಕಾರಿಗಳು ವಾಪಸ್ ಕಳುಹಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಇಂದು ಶಿವಶಂಕರಪ್ಪ ಸಾಹುಕಾರ್ ಗೆ ಮೂರನೇ ನೋಟಿಸ್ ಜಾರಿ ಮಾಡಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.



