
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಚ್ಛೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುತ್ತಿದ್ದಾಗ ಬೆಳಗಾವಿಯ ಗ್ರಾಮೀಣ ಪೊಲೀರು ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಪರುಶರಾಮ ಬಸಪ್ಪ ನಾಯಿಕ (35) ಬಂಧಿತ ಆರೋಪಿ, ಬೆಳಗಾವಿ ಗ್ರಾಮೀಣ ಠಾಣೆ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ, ಆರೋಪಿತನಿಂದ ಒಟ್ಟು 20 ಲೀಟರ್ಗಳಷ್ಟು ಕಳ್ಳಭಟ್ಟಿ ಸರಾಯಿ ಜಪ್ತಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ. 206/2026 ಕಲಂ. 32, 34 ಕರ್ನಾಟಕ ಅಬಕಾರಿ ಕಾಯ್ದೆ -1965 ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿ, ತನಿಖೆ ಮುಂದುವರೆಸಲಾಗಿದೆ.



