Belagavi NewsBelgaum NewsKannada NewsKarnataka NewsPolitics

*‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಡಾ.  ಸೋನಾಲಿ ಸರ್ನೋಬತ್ ಭಾಗಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಡಾ.  ಸೋನಾಲಿ ಸರ್ನೋಬತ್ ಅವರು ಇಂದು ಉತ್ಸಾಹದಿಂದ ಭಾಗವಹಿಸಿದರು.

ಇಂದಿನ ಪ್ರತಿಭಟನಾ ಕಾರ್ಯಕ್ರಮವನ್ನು ವಿಶೇಷವಾಗಿ ಬಿಜೆಪಿ ಮಹಿಳಾ ಮೋರ್ಚಾಗೆ ಮೀಸಲಿಡಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಮಹಿಳಾ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

Home add -Advt

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರಿಗೆ ಆರತಿ ಬೆಳಗಿಸಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮಹಿಳಾ ಶಕ್ತಿ, ಏಕತೆ ಮತ್ತು ಹೋರಾಟದ ಸಂಕೇತವಾಗಿ ಅವರಿಗೆ ಗದೆಯ ಸ್ಮರಣಿಕೆಯನ್ನು ಗೌರವಪೂರ್ವಕವಾಗಿ ನೀಡಲಾಯಿತು.

ಡಾ.  ಸೋನಾಲಿ ಸರ್ನೋಬತ್ ಅವರು ಬೆಳಗಾವಿಯ ಮಹಿಳಾ ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ಕುರಿತು ತೀವ್ರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪ್ರಮುಖವಾಗಿ, ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಆರೋಪಗಳ ಕುರಿತು ಉತ್ತರ ನೀಡಬೇಕು. ಬರಪೀಡಿತ ಹಲವು ಜಿಲ್ಲೆಗಳನ್ನು ಇನ್ನೂ ಸಮರ್ಪಕವಾಗಿ ಘೋಷಿಸದೆ ಇರುವ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು. ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಗೃಹಲಕ್ಷ್ಮಿ ಯೋಜನೆಯಲ್ಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸರ್ಕಾರ ಉತ್ತರಿಸಬೇಕು. ಜನರ ಹಣದ ಬಳಕೆ ಮತ್ತು ಸರ್ಕಾರದ ಯೋಜನೆಗಳಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಇರಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಬಿಜೆಪಿ ಮುಂದಿಡಲಾಯಿತು.

ರಾಜ್ಯದಾದ್ಯಂತ ಬಿಜೆಪಿಯ ನಿರಂತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಬಿಜೆಪಿ ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಜನರ ಸಮಸ್ಯೆಗಳಿಗೆ ಉತ್ತರ ನೀಡುವವರೆಗೆ ಹಾಗೂ ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಖಚಿತವಾಗುವವರೆಗೆ ಬಿಜೆಪಿ ಹೋರಾಟ ಮುಂದುವರಿಸಲಿದೆ.

Related Articles

Back to top button