Kannada NewsKarnataka NewsNationalPolitics

*ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ: ದೆಹಲಿ ಹೈಕಮಾಂಡ್ ಭೇಟಿಗೆ ಮುಂದಾದ ಹರಿಪ್ರಸಾದ್* 

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.

ಅಂತಿಮ ಹಂತ ತಲುಪಿದ ಪಟ್ಟಿ ಪರಿಶೀಲನೆ ಜಿಲ್ಲಾ ಮಟ್ಟದ ನಾಯಕರೊಂದಿಗೆ ಎಐಸಿಸಿ ವೀಕ್ಷಕರು ನಡೆಸಿದ ಸಮಾಲೋಚನೆಯ ಆಧಾರದ ಮೇಲೆ ಪ್ರಮುಖ ಅಭ್ಯರ್ಥಿಗಳ ಸಂಕ್ಷಿಪ್ತ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. 

Home add -Advt

ಈ ಪಟ್ಟಿಯ ಕುರಿತು ಹರಿಪ್ರಸಾದ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. 

ದಕ್ಷಿಣ ಭಾರತದಲ್ಲೇ ಮೊದಲ ಯುವ ತರಬೇತಿ ಕೇಂದ್ರಜೆನ್-ಝಡ್ ಯುವಕರನ್ನು ಸಂವಿಧಾನದ ಮೌಲ್ಯಗಳು ಹಾಗೂ ಪಕ್ಷದ ಸಿದ್ಧಾಂತಕ್ಕೆ ತರಬೇತಿಗೊಳಿಸಲು ದಕ್ಷಿಣ ಭಾರತದಲ್ಲೇ ಮೊದಲ ಕಾಂಗ್ರೆಸ್ ಕಾಯಂ ತರಬೇತಿ ಕೇಂದ್ರ ಸ್ಥಾಪಿಸಲು ರಾಜ್ಯ ಘಟಕ ನಿರ್ಧರಿಸಿದೆ.

Related Articles

Back to top button