
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಹೊರಡಿಸಿರುವ ಆದೇಶದ ಪ್ರಕಾರ, ಬೆಂಗಳೂರು ನಗರ ನೈರುತ್ಯ ವಿಭಾಗದ ಡಿಸಿಪಿಯಾಗಿದ್ದ ಅನಿತಾ ಭೀಮಪ್ಪ ಹದ್ದಣ್ಣನವರ್ ಅವರನ್ನು ಸಿಐಡಿ ಪೊಲೀಸ್ ಅಧೀಕ್ಷಕರಾಗಿ (ಎಸ್ಪಿ) ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದ ಕೆ. ಲಕ್ಷ್ಮೀ ಗಣೇಶ್ ಅವರನ್ನು ನೈರುತ್ಯ ವಿಭಾಗದ ನೂತನ ಡಿಸಿಪಿಯಾಗಿ ನೇಮಿಸಲಾಗಿದೆ.
ಇನ್ನು ಸಿಐಡಿ ಎಸ್ಪಿಯಾಗಿದ್ದ ಸ್ಯಾಮ್ ವರ್ಗೀಸ್ ಅವರನ್ನು ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರನ್ನಾಗಿ (ಡಿಸಿಪಿ) ನೇಮಕ ಮಾಡಲಾಗಿದೆ. ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಡಾ. ರಾಮ್ ಎಲ್. ಅರಸಿದ್ಧಿ ಅವರಿಗೆ ಬೆಂಗಳೂರು ನಗರ ಗುಪ್ತಚರ ವಿಭಾಗದ ಡಿಸಿಪಿ ಹುದ್ದೆಯನ್ನು ನೀಡಲಾಗಿದೆ.



