Kannada NewsKarnataka NewsLatest

*BREAKING: ಹಬ್ಬದ ದಿನವೇ ದುರಂತ: ಈಜಲು ಹೋಗಿದ್ದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಸಾವು*

ಪ್ರಗತಿವಾಹಿನಿ ಸುದ್ದಿ: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲೇ ದುರಂತವೊಂದು ನಡೆದಿದೆ. ಕೆರೆಯಲ್ಲಿ ಈಜಲು ಹೋಗಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮಿನಕೊಪ್ಪ ದೊಡ್ಡ ಕೆರೆಯಲ್ಲಿ ನಡೆದಿದೆ.

Home add -Advt

ಶಿವಮೊಗ್ಗದ ವಿನೋಬಾನಗರದ ಸೋಮಿನಕೊಪ್ಪ ದೊಡ್ಡಕೆರೆಯಲ್ಲಿ ಘಟನೆ ನಡೆದಿದೆ. 15 ವರ್ಷದ ಬೃಹಾನ್ ನೀರು ಪಾಲಾಗಿ ಮೃತಪಟ್ಟಿರುವ ಬಾಲಕ. ಎಸ್.ಎಸ್.ಎಲ್.ಸಿ ಓದುತ್ತಿದ್ದ ಬೃಹಾನ್ ಇಂದು ಸ್ನೇಹಿತರೊಂದಿಗೆ ಸೇರಿ ಕೆರೆಯಲ್ಲಿ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಮಗನನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗದ ವಿನೋಬಾನಗರ ಪೊಲೀಸ್ ಠಾಣೆ ವ್ಯಾಅಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬಾಲಕನಿಗಾಗಿ ಶೋಧಕಾರ್ಯ ನಡೆಸಿದ್ದಾರೆ.

Related Articles

Back to top button