Karnataka NewsLatestPolitics

*ಯುಪಿಐ ಮೇಲಿನ ತೆರಿಗೆ ವಿರುದ್ಧ ದೇಶವೇ ಹೋರಾಟ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಯುಪಿಐ ವಹಿವಾಟಿನ ಮೇಲೆ ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಇಡೀ ದೇಶ ಹೋರಾಟ ನಡೆಸಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.

Home add -Advt

ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಯುಪಿಐ ವಹಿವಾಟಿನ ಮೇಲೆ ತೆರಿಗೆ ವಿಧಿಸಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುವುದೇ ಎಂದು ಕೇಳಿದಾಗ, “ಇದು ಕೇವಲ ಕಾಂಗ್ರೆಸ್ ಪಕ್ಷದ ವಿಚಾರವಲ್ಲ. ಇಡೀ ದೇಶದ ಸಮಸ್ಯೆಯಾಗಿದೆ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷವಾಗಿದ್ದು, ಜನಸಾಮಾನ್ಯರ ಹಿತ ಕಾಯಲು ಹೋರಾಟ ಮಾಡಲಿದೆ. ಹೀಗಾಗಿ ನಮ್ಮ ಪ್ರಧಾನ ಕಾರ್ಯದರ್ಶಿಗಳು ದೇಶದ ಜನರ ಪರವಾಗಿ ಮಾಧ್ಯಮಗೋಷ್ಠಿ ನಡೆಸಿ ದೇಶದ ಜನರಿಗೆ ಸಂದೇಶ ರವಾನಿಸಿದ್ದಾರೆ” ಎಂದು ತಿಳಿಸಿದರು.

Related Articles

Back to top button