
ಪ್ರಗತಿವಾಹಿನಿ ಸುದ್ದಿ: ಶಿಷ್ಟಾಚಾರ ಉಲ್ಲಂಘನೆ ಮತ್ತು ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಬೀದರ್ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಧ್ಯಾನೇಶ್ವರ ನಿರಗುಡಿ ಮತ್ತು ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಮೈಲಾರಿ ಅಮಾನತುಗೊಂಡ ಅಧಿಕಾರಿಗಳು.
ಶಿಷ್ಟಾಚಾರ ಉಲ್ಲಂಘನೆ ಮತ್ತು ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಉಪವಿಭಾಗ ಆಸ್ಪತ್ರೆ ಕಟ್ಟಡ ಕಾಮಗಾರಿಯ ಸಂದರ್ಭದಲ್ಲಿ ನಡೆದ ಘಟನೆಯೇ ಅಮಾನತಿಗೆ ಮುಖ್ಯ ಕಾರಣವಾಗಿದೆ. ಕಾಮಗಾರಿ ಸ್ಥಳದಲ್ಲಿ ಹಾಕಲಾಗಿದ್ದ ಬ್ಯಾನರ್ನಲ್ಲಿ ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಭಾವಚಿತ್ರವನ್ನು ಹಾಕದೇ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿಯೂ ಈ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ದೂರು ಕೇಳಿಬಂದಿದೆ.


