Kannada NewsKarnataka NewsLatest

*ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಬೆಂಗಳೂರಿನ 52ನೇ ಸೆಷನ್ಸ್ ಕೋರ್ಟ್‌ನಲ್ಲಿ ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಆರೋಪಿ ಪರ ವಕೀಲರ ವಾದ ಆಲಿಸಿದ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಿದೆ.

Home add -Advt

ಇದೇ ವೇಳೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಸಹ ಸೆ.21ಕ್ಕೆ ಕೋರ್ಟ್ ಕಾಯ್ದಿರಿಸಿದೆ.

ಕೆಪಿಎಸ್‌ಸಿ ಹಗರಣದಲ್ಲಿ ಈವರೆಗೆ ಸಿಐಡಿ ವಿಚಾರಣೆ ಎದುರಿಸುತ್ತಿದ್ದ ಗ್ಯಾನೇಂದ್ರ ಕುಮಾರ್ ಗೆ ಇದೀಗ ಇಡಿ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಸರಿಯಾಗಿ ಸಹಕರಿಸದ ಕಾರಣ ಇಡಿ ಅಧಿಕಾರಿಗಳು ಗ್ಯಾನೇಂದ್ರ ಕುಮಾರ್ ನನು ಬಂಧಿಸಿವೆ.

Related Articles

Back to top button