
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಶುಕ್ರವಾರ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಮತ್ತು ಅಲ್ಲಿನ ವಿಶೇಷ ವಾರ್ಡ್ ವ್ಯವಸ್ಥೆ ಕುರಿತು ಶಂಕರಗೌಡ ಪಾಟೀಲ ಪರಿಶೀಲನೆ ನಡೆಸಿದರು.

ಇದೇ ವೇಳೆ, ಹೊಸ ಎಂಆರ್ ಐ ಸ್ಕ್ಯಾನಿಂಗ್ ಮಷೀನ್ ವಿಭಾಗಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬಿಮ್ಸ್ ನಿರ್ದೇಶಕ ಡಾಕ್ಟರ್ ವಿನಯ್ ದಾಸ್ತಿಕೊಪ್ಪ, ಆಸ್ಪತ್ರೆ ಸರ್ಜನ್ ಡಾಕ್ಟರ್ ಖಾಜಿ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ನ್ಯಾಯವಾದಿ ಎನ್.ಆರ್. ಲಾತೂರ್, ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗಣಿಕರ್, ಬಿಜೆಪಿ ಮುಖಂಡರಾದ ಕಿರಣ್ ಜಾಧವ್, ಶಿವಾಜಿ ಸುಂಟಕರ್, ಮುರನಾಳ ಮೊದಲಾದವರು ಉಪಸ್ಥಿತರಿದ್ದರು.